A Kannada book by Akshara Prakashana / ಅಕ್ಷರ ಪ್ರಕಾಶನ
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಜೋಗಿನ್ಮನೆಯವರು. ಸಂಸ್ಕೃತದಲ್ಲಿ ಎಂ.ಎ. ಪದವೀಧರರು. ಸಿದ್ದಾಪುರದ ಮಹಾತ್ಮಾಗಾಂಧೀ ಶತಾಬ್ದಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಮತ್ತು ಪ್ರಾಂಶುಪಾಲರಾಗಿ ಸೇವೆ. ಯಕ್ಷಗಾನ ಅರ್ಥಧಾರಿ, ಪ್ರಸಂಗಕರ್ತ, ವೇಷಧಾರಿ. ತತ್ವಶಾಸ್ತ್ರ, ಅಲಂಕಾರಶಾಸ್ತ್ರ, ಮೊದಲಾದ ಶಾಸ್ತ್ರೀಯ ವಿಷಯಗಳಲ್ಲಿ ಇವರ ಕೆಲವು ಗ್ರಂಥಗಳೂ, ಹಲವು ಲೇಖನಗಳೂ ಪ್ರಕಟವಾಗಿವೆ. ‘ಭಾರತೀಯ ತತ್ತ್ವಶಾಸ್ತ್ರ ಪ್ರವೇಶ’, ‘ಶಬ್ದ ಮತ್ತು ಜಗತ್ತು’, ‘ಬಾಲರಾಮಾಯಣ’ - ಮೊದಲಾದವು ಇವರ ಪ್ರಕಟಿತ ಪುಸ್ತಕಗಳು. ಹದಿನೈದು ಯಕ್ಷಗಾನ ಪ್ರಸಂಗಗಳನ್ನು ಇವರು ಬರೆದಿದ್ದಾರೆ.